July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya
error: Content is protected !!