26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ದ್ವಿತೀಯ ಪಿಯುಸಿ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು, ‘ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಬೇಕು, ಅವಕಾಶಗಳ ಸದ್ಬಳಕೆಯಿಂದ ವಿಕಸಿತ ಭಾರತದ ನಿರ್ಮಾಣ ಸಾಧ್ಯ’ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ, ಅವರು ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಮೂಲಕ ಕೈಗೊಳ್ಳಬಹುದಾದ ಸಮಾಜಮುಖಿ ಕೆಲಸಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ರೇಂಜರ್ ಲೀಡರ್ ವಸಂತಿ ನಾಯ್ಕ್ ಉಪಸ್ಥಿತರಿದ್ದರು. ಪ್ರಥಮ ಪಿಯುಸಿಯ ರೇಂಜರ್ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.

Related posts

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya
error: Content is protected !!