20.5 C
ಪುತ್ತೂರು, ಬೆಳ್ತಂಗಡಿ
February 7, 2025
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
error: Content is protected !!