September 6, 2026
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya
error: Content is protected !!