23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆ ಇಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅಗತ್ಯತೆಗಳನ್ನು ತಿಳಿಸಿ ಕೊಡುವ ಉದ್ದೇಶದಿಂದ ಆಯೋಜನೆ ಮಾಡಿದ ತಾಂತ್ರಿಕ ಶಿಕ್ಷಣ ಕಾರ್ಯಾಗಾರ ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮ ಗಣ್ಯ ಅತಿಥಿಗಳು ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಸರಿ ಉದ್ಘಾಟಿಸಿ ಮಾತಾಡಿದ ತಾಂತ್ರಿಕ ಶಿಕ್ಷಣದ ಮಹತ್ವ ಮತ್ತು ಅವಕಾಶಗಳು ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಈ ಕಾರ್ಯಾಗಾರದ ಉದ್ದೇಶ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ವಿಶೇಷ ಕಾರ್ಯಾಗಾರದ ಸಂಪನ್ಯೂಲ ವ್ಯಕ್ತಿಯಾಗಿ ಆಗಮಿಸಿದ ಜೇಸಿಐ ಭಾರತದ ರಾಷ್ಟ್ರೀಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಅವರು ತಾಂತ್ರಿಕ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಆಧುನಿಕ ಯುಗದಲ್ಲಿ ಅದರ ಅವಶ್ಯಕತೆ ಬಗ್ಗೆ ಪ್ರಭಾವಶಾಲಿ ತರಬೇತಿ ನೀಡಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಅಮರೇಶ್ ಹೆಬ್ಬಾರ್ ವಹಿಸಿದ್ದರು. ವೇದಿಕೆಯ ಮೇಲೆ ಕಾರ್ಯಾಗಾರದ ಸಂಯೋಜಕ ಮಿಥುನ್ ಕುಮಾರ್ ಬಿ ಉಪಸ್ಥಿತರಿದ್ದರು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ್ ಶೆಟ್ಟಿ ಹಾಗೂ ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕಾಲೇಜಿನ ಉಪನ್ಯಾಸಕ ಸಂಪತ್ ಕುಮಾರ್ ನಿರೂಪಿಸಿ, ಉಪನ್ಯಾಸಕ ಶಿವರಾಜ್ ವಂದಿಸಿದರು.

ಒಂದು ದಿನದ ಈ ವಿಶೇಷ ಕಾರ್ಯಾಗಾರದಲ್ಲಿ ಸತೀಶ್ ಭಟ್ ಅವರಿಂದ ತಾಂತ್ರಿಕ ಶಿಕ್ಷಣದ ಮಹತ್ವದ ಕುರಿತು ವಿಸ್ತೃತ ಮಾಹಿತಿ, ನಂತರ ಗೂಗಲ್ ಡ್ರೈವ್ ವೈಶಿಷ್ಟ್ಯಗಳು ಮತ್ತು ಉಪಯೋಗಗಳು – ಅಮರನಾಥ್ ಹೆಬ್ಬಾರ್, ಸಹಾಯಕ ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್ ಮತ್ತು ವರದರಾಜ್ ಬಲ್ಲಾಳ್ ಇವರಿಂದ ಮಾಹಿತಿ.
ನಂತರ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ– ಸಂಪತ್ ಕುಮಾರ್, ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್, ಉಜಿರೆ, ಅವರು ವಿದ್ಯಾರ್ಥಿಗಳಿಗೆ ಭವಿಷ್ಯದ ವೃತ್ತಿ ಯೋಜನೆ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಕಾರ್ಯಾಗಾರದಲ್ಲಿ ಬೆಳ್ತಂಗಡಿ ತಾಲೂಕಿನ 40ಕ್ಕೂ ಹೆಚ್ಚಿನ ಪ್ರೌಢ ಶಾಲಾ ಶಿಕ್ಷಕರು ಭಾಗವಹಿಸಿ ಸಾರ್ಥಕ ಪ್ರಯೋಜನ ಪಡೆದುಕೊಂಡರು.

Related posts

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!