18.5 C
ಪುತ್ತೂರು, ಬೆಳ್ತಂಗಡಿ
February 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ.

ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದು ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಸುನೀಗಿದ್ದಾರೆ.

ಮೃತರು ಪತ್ನಿ ರುಕ್ಯಾ, ಮಕ್ಕಳಾದ ರಫೀಕ್, ಝುಬೈದಾ ಮತ್ತು ಮಜೀದ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಕಾಜೂರಿನ ದಫನ ಭೂಮಿಯಲ್ಲಿ ನಡೆಯಿತು.

Related posts

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya
error: Content is protected !!