26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ.

ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದು ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಸುನೀಗಿದ್ದಾರೆ.

ಮೃತರು ಪತ್ನಿ ರುಕ್ಯಾ, ಮಕ್ಕಳಾದ ರಫೀಕ್, ಝುಬೈದಾ ಮತ್ತು ಮಜೀದ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಕಾಜೂರಿನ ದಫನ ಭೂಮಿಯಲ್ಲಿ ನಡೆಯಿತು.

Related posts

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!