23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ7 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಪ್ರಧಾನ ಹೋಮ, ಪಂಚವಿAಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ, ಪಂಚಪರ್ವ, ಬೆಳಿಗ್ಗೆ ೮ಕ್ಕೆ ಸಾಮೂಹಿಕ ಶ್ರೀ ಶನಿಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 6ರಿಂದ 7ವರೆಗೆ ಭಜನಾ ಕಾರ್ಯಕ್ರಮ ಮಲ್ಲಿಪ್ಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ತೆಂಕಕಾರಂದೂರು ಸದಸ್ಯರಿಂದ ಕುಣಿತ ಭಜನೆ, ಸಂಜೆ 7ಕ್ಕೆ ಕಾರ್ತಿಕ ಪೂಜೆ, ರಂಗಪೂಜೆ, ದೇವರ ಬಲಿ ಉತ್ಸವ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಮೂಜಿಲ್ನಾಯ, ಪಿಲಿಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಫೆ.11 ಬೆಳಿಗ್ಗೆ 8ಕ್ಕೆ ಸಂಪ್ರೋಕ್ಷಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya
error: Content is protected !!