35.6 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!