24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!