July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!