September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya
error: Content is protected !!