25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!