25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya
error: Content is protected !!