20.5 C
ಪುತ್ತೂರು, ಬೆಳ್ತಂಗಡಿ
February 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya
error: Content is protected !!