ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya
error: Content is protected !!