July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!