30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya
error: Content is protected !!