April 21, 2025
ಶಾಲಾ ಕಾಲೇಜು

ಸ್ವಾಮಿ ವಿವೇಕಾನಂದರ ಕುರಿತು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

ಬೆಳ್ತಂಗಡಿ: ವಿವೇಕಾನಂದರ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಇತ್ತೀಚೆಗೆ ವಿವೇಕಾನಂದ ಸೇವಾಶ್ರಮ ಇದರ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು. ತಾಲೂಕಿನ ಪ್ರೌಢಶಾಲಾ ವಿಭಾಗದ ಮಕ್ಕಳು ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಕುಮಾರಿ ನಿಷಿತಾ ನೇತಾಗಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಸವಣಾಲು ದ್ವಿತೀಯ ಸ್ಥಾನವನ್ನು ಶ್ರೇಯಾ ರೋಸ್ಲಿನ್ ಸೈಂಟ್ ಮೇರಿ ಪ್ರೌಢಶಾಲೆ ಲಾಯಿಲ ಇವರು ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಮಕ್ಕಳಲ್ಲಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದುವುದರ ಮೂಲಕ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಸೇವಾಶ್ರಮ ಬೆಳ್ತಂಗಡಿ ಇದರ ಅಧ್ಯಕ್ಷರಾದ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು, ಸಂಚಾಲಕ ರಾದ ಸುದೀಪ್ ಶೆಟ್ಟಿ ಉಪಾಧ್ಯಕ್ಷರಾದ ಗಿರೀಶ್ ಡೊಂಗ್ರೆ ಕಾರ್ಯದರ್ಶಿಗಳಾದ ಯಶವಂತ್ ದೇವಾಡಿಗ ವೇಣುರು ಹಾಗೂ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಗಣೇಶ್ ಭಂಡಾರಿ ನಿರ್ದೇಶಕರಾದ ಅಶೋಕ್ ರೈ ಉಪಸ್ಥಿತರಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98.58 ಫಲಿತಾಂಶ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿಗೆ ಶೇ.99.55 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
error: Content is protected !!