37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!