29.2 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!