September 6, 2026
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya
error: Content is protected !!