23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya
error: Content is protected !!