22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya
error: Content is protected !!