23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆ ಇಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅಗತ್ಯತೆಗಳನ್ನು ತಿಳಿಸಿ ಕೊಡುವ ಉದ್ದೇಶದಿಂದ ಆಯೋಜನೆ ಮಾಡಿದ ತಾಂತ್ರಿಕ ಶಿಕ್ಷಣ ಕಾರ್ಯಾಗಾರ ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮ ಗಣ್ಯ ಅತಿಥಿಗಳು ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಸರಿ ಉದ್ಘಾಟಿಸಿ ಮಾತಾಡಿದ ತಾಂತ್ರಿಕ ಶಿಕ್ಷಣದ ಮಹತ್ವ ಮತ್ತು ಅವಕಾಶಗಳು ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಈ ಕಾರ್ಯಾಗಾರದ ಉದ್ದೇಶ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ವಿಶೇಷ ಕಾರ್ಯಾಗಾರದ ಸಂಪನ್ಯೂಲ ವ್ಯಕ್ತಿಯಾಗಿ ಆಗಮಿಸಿದ ಜೇಸಿಐ ಭಾರತದ ರಾಷ್ಟ್ರೀಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಅವರು ತಾಂತ್ರಿಕ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಆಧುನಿಕ ಯುಗದಲ್ಲಿ ಅದರ ಅವಶ್ಯಕತೆ ಬಗ್ಗೆ ಪ್ರಭಾವಶಾಲಿ ತರಬೇತಿ ನೀಡಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಅಮರೇಶ್ ಹೆಬ್ಬಾರ್ ವಹಿಸಿದ್ದರು. ವೇದಿಕೆಯ ಮೇಲೆ ಕಾರ್ಯಾಗಾರದ ಸಂಯೋಜಕ ಮಿಥುನ್ ಕುಮಾರ್ ಬಿ ಉಪಸ್ಥಿತರಿದ್ದರು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ್ ಶೆಟ್ಟಿ ಹಾಗೂ ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕಾಲೇಜಿನ ಉಪನ್ಯಾಸಕ ಸಂಪತ್ ಕುಮಾರ್ ನಿರೂಪಿಸಿ, ಉಪನ್ಯಾಸಕ ಶಿವರಾಜ್ ವಂದಿಸಿದರು.

ಒಂದು ದಿನದ ಈ ವಿಶೇಷ ಕಾರ್ಯಾಗಾರದಲ್ಲಿ ಸತೀಶ್ ಭಟ್ ಅವರಿಂದ ತಾಂತ್ರಿಕ ಶಿಕ್ಷಣದ ಮಹತ್ವದ ಕುರಿತು ವಿಸ್ತೃತ ಮಾಹಿತಿ, ನಂತರ ಗೂಗಲ್ ಡ್ರೈವ್ ವೈಶಿಷ್ಟ್ಯಗಳು ಮತ್ತು ಉಪಯೋಗಗಳು – ಅಮರನಾಥ್ ಹೆಬ್ಬಾರ್, ಸಹಾಯಕ ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್ ಮತ್ತು ವರದರಾಜ್ ಬಲ್ಲಾಳ್ ಇವರಿಂದ ಮಾಹಿತಿ.
ನಂತರ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ– ಸಂಪತ್ ಕುಮಾರ್, ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್, ಉಜಿರೆ, ಅವರು ವಿದ್ಯಾರ್ಥಿಗಳಿಗೆ ಭವಿಷ್ಯದ ವೃತ್ತಿ ಯೋಜನೆ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಕಾರ್ಯಾಗಾರದಲ್ಲಿ ಬೆಳ್ತಂಗಡಿ ತಾಲೂಕಿನ 40ಕ್ಕೂ ಹೆಚ್ಚಿನ ಪ್ರೌಢ ಶಾಲಾ ಶಿಕ್ಷಕರು ಭಾಗವಹಿಸಿ ಸಾರ್ಥಕ ಪ್ರಯೋಜನ ಪಡೆದುಕೊಂಡರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!