September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆಯು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ಜಸ್ಮಿತ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇದರ ಆರೋಗ್ಯ ಅಧಿಕಾರಿ ಪ್ರಶಾಂತ್ ಆರ್.ಕೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಮನ ಯೆಸ್, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಮತಿ, ಶಾಲಾ ಅಧ್ಯಕ್ಷ ಪುರುಷೋತ್ತಮ ಗೌಡ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಅಧಿಕಾರಿ ಅಶ್ವಿನಿ, ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಉಮಾವತಿ, ಶ್ರೀ ಮತಿ ಸುಮತಿ ಗೌಡ, ಶ್ರೀಮತಿ ಗಾಯತ್ರಿ ಮತ್ತು ಅಮಿತ್ ಕುಮಾರ್, ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಮೇಶ ನಾಯ್ಕ ಸ್ವಾಗತಿಸಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ರಮೇಶ್ ಗೌಡ ಧನ್ಯವಾದವಿತ್ತರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!