24.4 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ.

ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದು ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಸುನೀಗಿದ್ದಾರೆ.

ಮೃತರು ಪತ್ನಿ ರುಕ್ಯಾ, ಮಕ್ಕಳಾದ ರಫೀಕ್, ಝುಬೈದಾ ಮತ್ತು ಮಜೀದ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಕಾಜೂರಿನ ದಫನ ಭೂಮಿಯಲ್ಲಿ ನಡೆಯಿತು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!