22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ.

ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದು ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಸುನೀಗಿದ್ದಾರೆ.

ಮೃತರು ಪತ್ನಿ ರುಕ್ಯಾ, ಮಕ್ಕಳಾದ ರಫೀಕ್, ಝುಬೈದಾ ಮತ್ತು ಮಜೀದ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಕಾಜೂರಿನ ದಫನ ಭೂಮಿಯಲ್ಲಿ ನಡೆಯಿತು.

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya
error: Content is protected !!