24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ.

ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದು ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಸುನೀಗಿದ್ದಾರೆ.

ಮೃತರು ಪತ್ನಿ ರುಕ್ಯಾ, ಮಕ್ಕಳಾದ ರಫೀಕ್, ಝುಬೈದಾ ಮತ್ತು ಮಜೀದ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಕಾಜೂರಿನ ದಫನ ಭೂಮಿಯಲ್ಲಿ ನಡೆಯಿತು.

Related posts

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya
error: Content is protected !!