September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ.

ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದು ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಸುನೀಗಿದ್ದಾರೆ.

ಮೃತರು ಪತ್ನಿ ರುಕ್ಯಾ, ಮಕ್ಕಳಾದ ರಫೀಕ್, ಝುಬೈದಾ ಮತ್ತು ಮಜೀದ್ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಗುರುವಾರ ಕಾಜೂರಿನ ದಫನ ಭೂಮಿಯಲ್ಲಿ ನಡೆಯಿತು.

Related posts

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya
error: Content is protected !!