29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ7 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಪ್ರಧಾನ ಹೋಮ, ಪಂಚವಿAಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ, ಪಂಚಪರ್ವ, ಬೆಳಿಗ್ಗೆ ೮ಕ್ಕೆ ಸಾಮೂಹಿಕ ಶ್ರೀ ಶನಿಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 6ರಿಂದ 7ವರೆಗೆ ಭಜನಾ ಕಾರ್ಯಕ್ರಮ ಮಲ್ಲಿಪ್ಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ತೆಂಕಕಾರಂದೂರು ಸದಸ್ಯರಿಂದ ಕುಣಿತ ಭಜನೆ, ಸಂಜೆ 7ಕ್ಕೆ ಕಾರ್ತಿಕ ಪೂಜೆ, ರಂಗಪೂಜೆ, ದೇವರ ಬಲಿ ಉತ್ಸವ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಮೂಜಿಲ್ನಾಯ, ಪಿಲಿಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಫೆ.11 ಬೆಳಿಗ್ಗೆ 8ಕ್ಕೆ ಸಂಪ್ರೋಕ್ಷಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ ತಿಳಿಸಿದ್ದಾರೆ.

Related posts

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!