23.3 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ7 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಪ್ರಧಾನ ಹೋಮ, ಪಂಚವಿAಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ, ಪಂಚಪರ್ವ, ಬೆಳಿಗ್ಗೆ ೮ಕ್ಕೆ ಸಾಮೂಹಿಕ ಶ್ರೀ ಶನಿಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 6ರಿಂದ 7ವರೆಗೆ ಭಜನಾ ಕಾರ್ಯಕ್ರಮ ಮಲ್ಲಿಪ್ಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ತೆಂಕಕಾರಂದೂರು ಸದಸ್ಯರಿಂದ ಕುಣಿತ ಭಜನೆ, ಸಂಜೆ 7ಕ್ಕೆ ಕಾರ್ತಿಕ ಪೂಜೆ, ರಂಗಪೂಜೆ, ದೇವರ ಬಲಿ ಉತ್ಸವ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಮೂಜಿಲ್ನಾಯ, ಪಿಲಿಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಫೆ.11 ಬೆಳಿಗ್ಗೆ 8ಕ್ಕೆ ಸಂಪ್ರೋಕ್ಷಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ ತಿಳಿಸಿದ್ದಾರೆ.

Related posts

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!