30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ7 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಪ್ರಧಾನ ಹೋಮ, ಪಂಚವಿAಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ, ಪಂಚಪರ್ವ, ಬೆಳಿಗ್ಗೆ ೮ಕ್ಕೆ ಸಾಮೂಹಿಕ ಶ್ರೀ ಶನಿಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 6ರಿಂದ 7ವರೆಗೆ ಭಜನಾ ಕಾರ್ಯಕ್ರಮ ಮಲ್ಲಿಪ್ಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ತೆಂಕಕಾರಂದೂರು ಸದಸ್ಯರಿಂದ ಕುಣಿತ ಭಜನೆ, ಸಂಜೆ 7ಕ್ಕೆ ಕಾರ್ತಿಕ ಪೂಜೆ, ರಂಗಪೂಜೆ, ದೇವರ ಬಲಿ ಉತ್ಸವ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಮೂಜಿಲ್ನಾಯ, ಪಿಲಿಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಫೆ.11 ಬೆಳಿಗ್ಗೆ 8ಕ್ಕೆ ಸಂಪ್ರೋಕ್ಷಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ ತಿಳಿಸಿದ್ದಾರೆ.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya
error: Content is protected !!