April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!