22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya
error: Content is protected !!