37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya
error: Content is protected !!