25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya
error: Content is protected !!