29.9 C
ಪುತ್ತೂರು, ಬೆಳ್ತಂಗಡಿ
April 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya
error: Content is protected !!