30.4 C
ಪುತ್ತೂರು, ಬೆಳ್ತಂಗಡಿ
June 6, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya
error: Content is protected !!