25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ: ಫೆ.05 ರಂದು ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಆಗ್ನೇಶ್ ಎಂಬವರ ದೂರಿನಂತೆ ನೆರೆ-ಮನೆಯ ವಿಜಯ ಹೆಗ್ಡೆ ಎಂಬವರ ಮನೆಯ ಅಂಗಳದಲ್ಲಿ ನಾಯಿಯೊಂದು ನದಿಬದಿಯಿಂದ ದನದಂತೆ ಕಾಣುವ ಯಾವುದೋ ಪ್ರಾಣಿಯ ಕಾಲನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಬರುತ್ತಿದ್ದುದನ್ನು ಆಗ್ನೇಶ್ ತಂದೆ ಅಮ್ಮಿ ಪೂಜಾರಿ ಎಂಬವರು ನೋಡಿ ವಿಜಯ ಹೆಗ್ಡೆಯರಿಗೆ ಮಾಹಿತಿ ತಿಳಿಸಿ ಬಳಿಕ ವಿಜಯ ಹೆಗ್ಡೆಯವರೊಂದಿಗೆ ನದಿ ಬದಿಗೆ ತೆರಳಿ ನೋಡಲಾಗಿ ಪ್ರಾಣಿಯ ಅವಶೇಷಗಳನ್ನು ಮಣ್ಣಿನಲ್ಲಿ ಹೂತು ಹಾಕಿದ್ದುದನ್ನು ಯಾವುದೋ ಪ್ರಾಣಿಗಳು ಕೆಡವಿರುವಂತೆ ಕಂಡುಬರುತ್ತಿದ್ದು, ನೂಜಿಲೋಡಿ ಮನೆಯಲ್ಲಿ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ಬಾಬ್ತು ಗಂಡು ಕರುವು ಈ ದಿನ ತೋಟದಲ್ಲಿ ಕಾಣಿಸದೇ ಇರುವುದರಿಂದ ಸದ್ರಿ ಜಾನುವಾರನ್ನು ಫೆ.04 ರಂದು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ಅವಶೇಷಗಳನ್ನು ನದಿ ಬದಿಯಲ್ಲಿ ಮಣ್ಣಿನಲ್ಲಿ ಹೂತುಹಾಕಿರುವ ಬಗ್ಗೆ ಶಂಕಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!