July 23, 2026
ಶಾಲಾ ಕಾಲೇಜು

ಸ್ವಾಮಿ ವಿವೇಕಾನಂದರ ಕುರಿತು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

ಬೆಳ್ತಂಗಡಿ: ವಿವೇಕಾನಂದರ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಇತ್ತೀಚೆಗೆ ವಿವೇಕಾನಂದ ಸೇವಾಶ್ರಮ ಇದರ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು. ತಾಲೂಕಿನ ಪ್ರೌಢಶಾಲಾ ವಿಭಾಗದ ಮಕ್ಕಳು ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಕುಮಾರಿ ನಿಷಿತಾ ನೇತಾಗಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಸವಣಾಲು ದ್ವಿತೀಯ ಸ್ಥಾನವನ್ನು ಶ್ರೇಯಾ ರೋಸ್ಲಿನ್ ಸೈಂಟ್ ಮೇರಿ ಪ್ರೌಢಶಾಲೆ ಲಾಯಿಲ ಇವರು ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಮಕ್ಕಳಲ್ಲಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದುವುದರ ಮೂಲಕ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಸೇವಾಶ್ರಮ ಬೆಳ್ತಂಗಡಿ ಇದರ ಅಧ್ಯಕ್ಷರಾದ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು, ಸಂಚಾಲಕ ರಾದ ಸುದೀಪ್ ಶೆಟ್ಟಿ ಉಪಾಧ್ಯಕ್ಷರಾದ ಗಿರೀಶ್ ಡೊಂಗ್ರೆ ಕಾರ್ಯದರ್ಶಿಗಳಾದ ಯಶವಂತ್ ದೇವಾಡಿಗ ವೇಣುರು ಹಾಗೂ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಗಣೇಶ್ ಭಂಡಾರಿ ನಿರ್ದೇಶಕರಾದ ಅಶೋಕ್ ರೈ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya
error: Content is protected !!