22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.6 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ ಸಿ. ಎನ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ದಿನೇಶ್, ಹರಿಯಪ್ಪ, ಭೋಜ, ಕೃಷ್ಣಪ್ಪ, ರತ್ನಾಕರ, ಸುಕೇಶ್ ರವರನ್ನು ಗೌರವಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತೇಜಸ್ವಿನಿ, ಪಂಚಾಯತ್‌ ಸದಸ್ಯರುಗಳಾದ, ಹೆಚ್ ಪ್ರಭಾಕರ, ಶ್ರೀಮತಿ ವಿಜಯ, ಎಂ ರಮೇಶ್, ಸತೀಶ ಪೂಜಾರಿ, ಸುರೇಂದ್ರ ಶೆಟ್ಟಿ, ಶ್ರೀಮತಿ ಗೀತಾ, ಶ್ರೀಮತಿ ಮೋಹಿನಿ, ಶ್ರೀಮತಿ ಲೀಲಾ, ಸುದರ್ಶನ್ ಶೆಟ್ಟಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ| ಸ್ಮೃತಿ ಯು. ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಪದ್ಮನಾಭ ನಿರೂಪಿಸಿ, ಸಿಬ್ಬಂದಿಗಳು ಸಹಕರಿಸಿದರು. ಗ್ರಾ.ಪಂ. ಸದಸ್ಯೆ ಕು. ದೀಕ್ಷಿತಾ ವಂದಿಸಿದರು.

Related posts

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya
error: Content is protected !!