April 21, 2025
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!