September 6, 2026
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ರಸ್ತೆ ಸುರಕ್ಷೆ ಹಾಗೂ ವಾಹನ ಚಾಲಕರು ಪಾಲಿಸಬೇಕಾದ ನಿಯಮಗಳನ್ನು ಸಭೆಗೆ ತಿಳಿಸಿದರು, ಹಾಗೂ ಚಿಕ್ಕ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ಸಂಧರ್ಭದಲ್ಲಿ ಕಡ್ಡಾಯವಾಗಿ ಸುರಕ್ಷತಾ ಬೆನ್ನು ಉಪಯೋಗಿಸುವ ಸಲಹೆ ನೀಡಿದರು.

ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಅರಿವು ಮೂಡಿಸುವಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿದರು. ವೇದಿಕೆಯಲ್ಲಿ ನೇಮಿರಾಜ ಆರಿಗ ಪ್ರಾಂಶುಪಾಲರು, ಶ್ರೀ ಮಹಾವೀರ ಡ್ರೈವಿಂಗ್ ಸ್ಕೂಲ್, ಗೋಪಾಲ ಪೈ ಪ್ರಾಂಶುಪಾಲರು, ವಿವೇಕ್ ಡ್ರೈವಿಂಗ್ ಸ್ಕೂಲ್, ಶಿವರಾಮ ಹೆಗ್ಡೆ ಪ್ರಾಂಶುಪಾಲರು, ಗುಡ್ ಲಕ್ ಡ್ರೈವಿಂಗ್ ಸ್ಕೂಲ್ ಮಂಜುನಾಥ ಅಧ್ಯಾಪಕರು ಆಳ್ವಾಸ್ ಕಾಲೇಜ್ ಮೂಡಬಿದ್ರೆ, ಹಾಗೂ ಎಲ್ಲಾ ವಾಹನ ಚಾಲಕರು ಹಾಗೂ ಮಾಲಕರು, ಹಾಗೂ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲರು ಹಾಜರಿದ್ದರು. ಅಂಬಾಪ್ರಸಾದ್ ಪ್ರಾಂಶುಪಾಲರು, ಅಂಬಾ ಡ್ರೈವಿಂಗ್ ಸ್ಕೂಲ್ ಇವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya
error: Content is protected !!