24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆ ಇಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅಗತ್ಯತೆಗಳನ್ನು ತಿಳಿಸಿ ಕೊಡುವ ಉದ್ದೇಶದಿಂದ ಆಯೋಜನೆ ಮಾಡಿದ ತಾಂತ್ರಿಕ ಶಿಕ್ಷಣ ಕಾರ್ಯಾಗಾರ ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮ ಗಣ್ಯ ಅತಿಥಿಗಳು ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಸರಿ ಉದ್ಘಾಟಿಸಿ ಮಾತಾಡಿದ ತಾಂತ್ರಿಕ ಶಿಕ್ಷಣದ ಮಹತ್ವ ಮತ್ತು ಅವಕಾಶಗಳು ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಈ ಕಾರ್ಯಾಗಾರದ ಉದ್ದೇಶ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ವಿಶೇಷ ಕಾರ್ಯಾಗಾರದ ಸಂಪನ್ಯೂಲ ವ್ಯಕ್ತಿಯಾಗಿ ಆಗಮಿಸಿದ ಜೇಸಿಐ ಭಾರತದ ರಾಷ್ಟ್ರೀಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಅವರು ತಾಂತ್ರಿಕ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಆಧುನಿಕ ಯುಗದಲ್ಲಿ ಅದರ ಅವಶ್ಯಕತೆ ಬಗ್ಗೆ ಪ್ರಭಾವಶಾಲಿ ತರಬೇತಿ ನೀಡಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಅಮರೇಶ್ ಹೆಬ್ಬಾರ್ ವಹಿಸಿದ್ದರು. ವೇದಿಕೆಯ ಮೇಲೆ ಕಾರ್ಯಾಗಾರದ ಸಂಯೋಜಕ ಮಿಥುನ್ ಕುಮಾರ್ ಬಿ ಉಪಸ್ಥಿತರಿದ್ದರು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ್ ಶೆಟ್ಟಿ ಹಾಗೂ ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕಾಲೇಜಿನ ಉಪನ್ಯಾಸಕ ಸಂಪತ್ ಕುಮಾರ್ ನಿರೂಪಿಸಿ, ಉಪನ್ಯಾಸಕ ಶಿವರಾಜ್ ವಂದಿಸಿದರು.

ಒಂದು ದಿನದ ಈ ವಿಶೇಷ ಕಾರ್ಯಾಗಾರದಲ್ಲಿ ಸತೀಶ್ ಭಟ್ ಅವರಿಂದ ತಾಂತ್ರಿಕ ಶಿಕ್ಷಣದ ಮಹತ್ವದ ಕುರಿತು ವಿಸ್ತೃತ ಮಾಹಿತಿ, ನಂತರ ಗೂಗಲ್ ಡ್ರೈವ್ ವೈಶಿಷ್ಟ್ಯಗಳು ಮತ್ತು ಉಪಯೋಗಗಳು – ಅಮರನಾಥ್ ಹೆಬ್ಬಾರ್, ಸಹಾಯಕ ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್ ಮತ್ತು ವರದರಾಜ್ ಬಲ್ಲಾಳ್ ಇವರಿಂದ ಮಾಹಿತಿ.
ನಂತರ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ– ಸಂಪತ್ ಕುಮಾರ್, ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್, ಉಜಿರೆ, ಅವರು ವಿದ್ಯಾರ್ಥಿಗಳಿಗೆ ಭವಿಷ್ಯದ ವೃತ್ತಿ ಯೋಜನೆ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಕಾರ್ಯಾಗಾರದಲ್ಲಿ ಬೆಳ್ತಂಗಡಿ ತಾಲೂಕಿನ 40ಕ್ಕೂ ಹೆಚ್ಚಿನ ಪ್ರೌಢ ಶಾಲಾ ಶಿಕ್ಷಕರು ಭಾಗವಹಿಸಿ ಸಾರ್ಥಕ ಪ್ರಯೋಜನ ಪಡೆದುಕೊಂಡರು.

Related posts

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!