September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ7 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ, ಪ್ರಧಾನ ಹೋಮ, ಪಂಚವಿAಶತಿ ಕಲಶ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ, ಪಂಚಪರ್ವ, ಬೆಳಿಗ್ಗೆ ೮ಕ್ಕೆ ಸಾಮೂಹಿಕ ಶ್ರೀ ಶನಿಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 6ರಿಂದ 7ವರೆಗೆ ಭಜನಾ ಕಾರ್ಯಕ್ರಮ ಮಲ್ಲಿಪ್ಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ತೆಂಕಕಾರಂದೂರು ಸದಸ್ಯರಿಂದ ಕುಣಿತ ಭಜನೆ, ಸಂಜೆ 7ಕ್ಕೆ ಕಾರ್ತಿಕ ಪೂಜೆ, ರಂಗಪೂಜೆ, ದೇವರ ಬಲಿ ಉತ್ಸವ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಮೂಜಿಲ್ನಾಯ, ಪಿಲಿಚಾಮುಂಡಿ, ಪಂಜುರ್ಲಿ, ಭೈರವ, ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಫೆ.11 ಬೆಳಿಗ್ಗೆ 8ಕ್ಕೆ ಸಂಪ್ರೋಕ್ಷಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಅಮರನಾಥ ಹೆಗ್ಡೆ ತಿಳಿಸಿದ್ದಾರೆ.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya
error: Content is protected !!