July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆ.7ರಿಂದ ಫೆ.10 ವರೆಗೆ ನಡೆಯಲಿದೆ.


ಫೆ.07 ಬೆಳಿಗ್ಗೆ ಗಣಹೋಮ, ಕಲಶಾಭಿಷೇಕ, ನಾಗತಂಬಿಲ, ಮಾಕಲಬ್ಬೆ ತಂಬಿಲ, ಬ್ರಹ್ಮಬೈದೇರುಗಳ ತಂಬಿಲ, ದೈವಗಳಿಗೆ ತಂಬಿಲ, ಬೆಳಿಗ್ಗೆ ಹಸಿರುವಾಣಿ ಹೊರೆಕಾಣಿಕೆ (ಶಿಶಿಲ, ಶಿವಾಜೆ, ಹತ್ಯಡ್ಕ ಗ್ರಾಮಸ್ಥರಿಂದ) ಫೆ.೦೮ ಬೆಳಿಗ್ಗೆ ತೋರಣ ಮುಹೂರ್ತ, ಧರ್ಮರಸು ಉಳ್ಳಾಕ್ಲು ಮತ್ತು ಪರಿವಾರ ದೈವಗಳ ನೇಮೋತ್ಸವ, ಮಧ್ಯಾಹ್ನ ಕೊಡಮಂದಾಯ ನೇಮ, ಕಲ್ಲಾಜೆಯಿಂದ ಪಿಲಿಕಲ್ತಾಯ ಭಂಡಾರ ಬರುವುದು. ಶಿರಾಡಿ ದೈವ, ಪಂಜುರ್ಲಿ ದೈವಗಳ ಭಂಡಾರ ತೆಗೆಯುವುದು, ಸಂಜೆ ಸತ್ಯ ಜಾವತೆ ನೇಮ, ಕಲ್ಕುಡ ಕಲ್ಲುರ್ಟಿ ನೇಮ, ರಾತ್ರಿ ಲೆಕ್ಕೆಸಿರಿ ಬಾವನ ನೇಮ, ಪರಿವಾರ ದೈವಗಳ ನೇಮ, ಅನ್ನಸಂತರ್ಪಣೆ, ರಾತ್ರಿ 10.30ಕ್ಕೆ ಪಿಲಿಕಲ್ತಾಯ ನೇಮ, ಫೆ. 09 ಉದಯತ್ಪೂರ್ವ 1.30ಕ್ಕೆ ಬಿರ್ಮೆರ್, ಶಿರಾಡಿ ದೈವಂಗಳು ಪರಿವಾರ ನೇಮ (ಜುಮ್ರಾಲಿ), ಬೆಳಿಗ್ಗೆ ೮ಕ್ಕೆ ಪಂಜುರ್ಲಿ, ಮಾಲದ ಕೊರಗ ನೇಮ, ಬೆಳಿಗ್ಗೆ 10ಕ್ಕೆ ಬಚ್ಚನಾಯಕ ಹಾಗೂ ಗುಳಿಗ ನೇಮ, ಸಂಜೆ 5ಕ್ಕೆ ಬೈದೇರುಗಳು ಭಂಡಾರ ತೆಗೆಯುವುದು, ರಾತ್ರಿ ಬೈದೇರುಗಳು ಗರಡಿ ಇಳಿಯುವುದು, ದೇಯಿ ಬೈದಿತಿ ಉತ್ಸವ ಹಾಗೂ ಬೈದೇರುಗಳು ಭೇಟಿ, ಫೆ.10 ಉದಯತ್ಪೂರ್ವ 1.30ಕ್ಕೆ ಮಾನಿಬಾಲೆ ಗರಡಿ ಇಳಿಯುವುದು, ಪ್ರಾತಃಕಾಲ 4.30ಕ್ಕೆ ಸುರಿಯ ಹಾಕುವುದು, ಬೆಳಿಗ್ಗೆ ಹರಿಕೆ ಮತ್ತು ಗಂಧ ಪ್ರಸಾದ ನೀಡಲಾಗುವುದು ಎಂದು ಕ್ಷೇತ್ರದ ಅನುವಂಶೀಯ ಧರ್ಮದರ್ಶಿಗಳಾದ ಜನಾರ್ದನ ಬಂಗೇರ ವಿ ತಿಳಿಸಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮ: ಫೆ.09 ಸಂಜೆ ಜೆಸಿ ಕುಶಾಲಪ್ಪ ಸಾರಥ್ಯದ ಬೆಸ್ಟ್ ಡ್ಯಾನ್ಸ್ ಇನ್ಸಿಟ್ಯೂಟ್ ಪ್ರಶಸ್ತಿ ವಿಜೇತ ಸಂಸ್ಥೆ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿ ಇವರಿಂದ ನೃತ್ಯ ರೂಪಕ ವೈಭವ ನಡೆಯಲಿದೆ.

Related posts

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!