September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ವೆಬ್ ಟೆಕ್ ಫುಲ್ ಸ್ಟ್ಯಾಕ್ ಫಾಸ್ಟ್ ಟ್ರ್ಯಾಕ್” ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!