23.3 C
ಪುತ್ತೂರು, ಬೆಳ್ತಂಗಡಿ
February 6, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!