30.2 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು ದಾಖಲಾಗಿದೆ.

ಘಟನೆ ವಿವರ: ಪೆರ್ಮುಡ ನಿವಾಸಿ ಪ್ರಭಾಕರ ರವರು ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಬಂದ ರೂ 2.25 ಲಕ್ಷ ನಗದು ಹಣವನ್ನು ತನ್ನ ಮನೆಯಾದ ನಿಟ್ಟಡೆ ಗ್ರಾಮದ ಪೆರ್ಮುಡ ಉದಯಸದನ ಮನೆ ಎಂಬಲ್ಲಿ ಬೆಡ್‌ ರೂಮ್‌ ಒಂದರ ಸೆಲ್ಫ್‌ ನಲ್ಲಿ ಚಾಪೆ ಅಡಿಯಲ್ಲಿ ಇಟ್ಟಿದ್ದರು.ಸದ್ರಿ ಹಣವನ್ನು ಪ್ರಭಾಕರ ರವರು ಫೆ.03 ರಂದು ಬೆಳಿಗ್ಗೆ ನೋಡಿದ್ದರು. ಆದರೆ ಅದೇ ದಿನ ಸಂಜೆ ನೋಡಿದಾಗ ಹಣವು ಕಾಣೆಯಾಗಿರುತ್ತದೆ.


ಪ್ರಭಾಕರ ಅಡಿಕೆ ಮಾರಾಟ ಮಾಡಿರುವ ವಿಚಾರ ನೆರೆಮನೆಯ ವಿಜಯ ಮೋನಿಸ್‌ ಎಂಬಾತನಿಗೆ ತಿಳಿದಿರುತ್ತದೆ. ಫೆ. 03 ರಂದು ವಿಜಯ ಮೋನಿಸ್‌ ಪ್ರಭಾಕರ ರವರ ಮನೆಗೆ ಬಂದು ಹೋಗಿದ್ದರು.
ಪ್ರಭಾಕರ ರವರು ಕಾಣೆಯಾದ ಹಣದ ಬಗ್ಗೆ ಮನೆಯಲ್ಲಿ ಹುಡುಕಾಡಿ ಮನೆಗೆ ಬಂದಿದ್ದ ವಿಜಯ ಮೋನಿಸ್‌ ನನ್ನು ವಿಚಾರಿಸಿ ಹಣ ಪತ್ತೆಯಾಗದೇ ಇರುವುದರಿಂದ ಇದೀಗ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಾಣೆಯಾದ ಹಣವನ್ನು ವಿಜಯ ಮೋನಿಸ್‌ ಎಂಬಾತನೇ ತೆಗೆದಿರಬಹುದು ಎಂಬ ಬಗ್ಗೆ ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ . ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!